Connect with us

Hi, what are you looking for?

Diksoochi News

ರಾಜ್ಯ

ನವದೆಹಲಿ : ಕರ್ನಾಟಕ ಅಡಿಕೆ ಬೆಳೆಗಾರರ ಸಂಘದಿಂದ ಸಚಿವೆ ಶೋಭಾ ಕರಂದ್ಲಾಜೆ ಭೇಟಿ; ಕೇಂದ್ರ ಕೃಷಿ ಸಚಿವ ತೋಮರ್ ಜೊತೆ ಚರ್ಚೆ

2

ವರದಿ : ದಿನೇಶ್ ರಾಯಪ್ಪನಮಠ

ನವದೆಹಲಿ: ಕೃಷಿ ಭವನದಲ್ಲಿ ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಕರ್ನಾಟಕದ ಅಡಿಕೆ ಬೆಳೆಗಾರರ ಸಂಘದ ಸದಸ್ಯರನ್ನು ಭೇಟಿಯಾಗಿ ಚರ್ಚಿಸಿದರು.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಸಮ್ಮುಖದಲ್ಲಿ ನಡೆದ ಚರ್ಚೆಯಲ್ಲಿ, ಅಡಿಕೆ ಕೃಷಿಗೆ ಆವರಿಸಿರುವ ಹಳದಿ ರೋಗ ಹಾಗೂ ರಾಜ್ಯದ ಅಡಿಕೆ ಬೆಳೆಗಾರ ಹಿತ ಕಾಯುವ ನಿಟ್ಟಿನಲ್ಲಿ ಇನ್ನಿತರ ವಿಚಾರಗಳನ್ನು ಚರ್ಚಿಸಲಾಯಿತು. ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಶೋಭಾ ಕರಂದ್ಲಾಜೆಯವರು ಕೇಂದ್ರ ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ದೇಶದ ಸಮಸ್ತ ರೈತರ ಸಮಗ್ರ ಕಲ್ಯಾಣಕ್ಕಾಗಿ ಅಗತ್ಯ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತಿದೆ ಹಾಗೂ ದೇಶದ ರೈತರ ಹಿತವನ್ನು ಕಾಯಲು ಪ್ರಧಾನಿ ನರೇಂದ್ರ ಮೋದಿ ಜಿ ನೇತೃತ್ವದ ಸರ್ಕಾರ ಬದ್ದವಾಗಿದೆ ಎಂದು ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಭರವಸೆಯನ್ನು ನೀಡಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!