ಮಂಡ್ಯ : ಲಾರಿ ಚಕ್ರ ಬ್ಲ್ಯಾಸ್ಟ್ ಆಗಿ ಲಾರಿ ಚಾಲಕ ಸಜೀವ ದಹನವಾಗಿರುವ ಘಟನೆ ಮದ್ದೂರು ಪಟ್ಟಣದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಹಾಸನ ಮೂಲದ ದಿನೇಶ್ ಮೃತ ದುರ್ದೈವಿ.
ಮದ್ದೂರು ಪಟ್ಟಣದ ಬೆಂಗಳೂರು – ಮೈಸೂರು ಎಲ್.ಐ.ಸಿ ಕಛೇರಿ ಎದುರು ಈ ದುರಂತ ಸಂಭವಿಸಿದೆ. ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಎಲ್.ಐ.ಸಿ ಕಛೇರಿ ಬಳಿ ಬರುತ್ತಿದ್ದಂತೆ ಪಂಚರ್ ಆಗಿ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ.
Advertisement. Scroll to continue reading.

ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿ ಬೆಂಕಿ ಹೊತ್ತಿಕೊಂಡಿದೆ.ಲಾರಿಯ ಮುಂದಿನ ಭಾಗ ನಜ್ಜುಗುಜ್ಜಾದ ಹಿನ್ನೆಲೆಯಲ್ಲಿ ಲಾರಿಯಲ್ಲೆ ಚಾಲಕ ಸಿಲುಕಿ ಸಜೀವ ದಹನವಾಗಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಚಾಲಕನ ಶವ ಹೊರತೆಗೆಯಲಾಗಿದೆ. ಚಾಲಕನ ಶವ ಮದ್ದೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, lorry blast, madduru, mandya

Click to comment