ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಆನಂದ ಬಿಲ್ಲವ ಪುನರಾಯ್ಕೆಯಾಗಿದ್ದಾರೆ.
ನಿನ್ನೆ ಮಧ್ಯಾಹ್ನ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಆನಂದ ಬಿಲ್ಲವ, ಉಪಾಧ್ಯಕ್ಷರಾಗಿ ವಾಸುದೇವ ಸೇರುಗಾರ ಆಯ್ಕೆಯಾಗಿದ್ದಾರೆ.
Advertisement. Scroll to continue reading.


ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿದರು. ಈ ವೇಳೆ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ವಂದಿಸಿದರು.
ಮಾರ್ಚ್ 6 ರಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಗೆ ಚುನಾವಣೆ ನಡೆದಿದ್ದು, ಆನಂದ ಬಿಲ್ಲವ ನೇತೃತ್ವದ ತಂದ 13 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಒಂದು ಸ್ಥಾನದಲ್ಲಿ ಅವಿರೋಧವಾಗಿ ಆಯ್ಕೆಯಾಗಿತ್ತು.
Advertisement. Scroll to continue reading.

In this article:Diksoochi news, Diksoochi t v, diksoochi udupi, gangolli sahakari bank
Click to comment

































