ಬೆಂಗಳೂರು : ರಾಜ್ಯದಲ್ಲಿ ಹಿಜಾಬ್, ಹಲಾಲ್ ಬಳಿಕ ಆಜಾನ್ ವಿವಾದ ಭುಗಿಲೆದ್ದಿದ್ದು, ಈ ಸಂಬಂಧ ಶಬ್ಧಮಾಲಿನ್ಯ ರೂಲ್ಸ್ ಪಾಲಿಸದ 301 ಧಾರ್ಮಿಕ ಸ್ಥಳಗಳಿಗೆ ನೋಟಿಸ್ ನೀಡಲಾಗಿದೆ.
ಮಂದಿರ, ಮಸೀದಿ, ಚರ್ಚ್ಗಳಿಗೆ ನೋಟಿಸ್ ನೀಡಲಾಗಿದ್ದು, ಶಬ್ಧಮಾಲಿನ್ಯ ರೂಲ್ಸ್ ಸರಿಯಾಗಿ ಪಾಲಿಸುವಂತೆ ಹೇಳಲಾಗಿದೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಮಾಹಿತಿ ನೀಡಿದ್ದು,ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ 6 ತಿಂಗಳ ಹಿಂದೆಯೇ ಹೈಕೋರ್ಟ್ ಆದೇಶ ನೀಡಿದ್ದು, ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಾ ಇದ್ದಾರೆ. ಹೈಕೋರ್ಟ್ ಆದೇಶ ಏನಿದೆ ಅದನ್ನು ಪಾಲಿಸಬೇಕು. ಕಾನೂನು ಉಲ್ಲಂಘನೆ ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಬೆಂಗಳೂರು ನಗರದಲ್ಲಿ ಮಾತ್ರ ಈಗಾಗಲೇ 40ಕ್ಕೂ ಹೆಚ್ಚು ಕೇಸ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಹಲವೆಡೆ ಮೈಕ್ಗಳನ್ನ ಜಪ್ತಿ ಮಾಡಲಾಗಿದ್ದು, ಬಾಲ ಬಿಚ್ಚಿದ್ರೆ ಕಾನೂನು ಕ್ರಮ ಖಂಡಿತ. ಹಾಗಾಗಿ ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
