Connect with us

Hi, what are you looking for?

Diksoochi News

ರಾಷ್ಟ್ರೀಯ

ದೇವಸ್ಥಾನದಿಂದ ವಾಪಾಸಾಗುತ್ತಿದ್ದ ವೇಳೆ ದುರಂತ: ಟ್ರಕ್ – ಮಿನಿ ವ್ಯಾನ್ ನಡುವೆ ಡಿಕ್ಕಿ; ನಾಲ್ವರ ದುರ್ಮರಣ

1

ತಿರುಪತಿ: ಟ್ರಕ್ ಮತ್ತು ಮಿನಿವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ತಿರುಪತಿ ಜಿಲ್ಲೆಯ ಶ್ರೀಕಾಳಹಸ್ತಿಯ ರೇಣಿಗುಂಟಾ-ನಾಯ್ಡುಪೇಟ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

12 ಮಂದಿಯ ತಂಡವೊಂದು ಮಿನಿ ವ್ಯಾನ್ ನಲ್ಲಿ ಚಿಲಕೂರು ಮಂಡಲದ ತುರುಪು ಕನುಪುರು ಗ್ರಾಮದ ಮುತ್ಯಾಲಮ್ಮ ದೇವಸ್ಥಾನದಲ್ಲಿ ದರ್ಶನ ಪಡೆದು ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಅವಘಡ ಸಂಭವಿಸಿದೆ.

ಮಿನಿವ್ಯಾನ್ ಶ್ರೀಕಾಳಹಸ್ತಿಯ ಅರ್ಧನಾಧೀಶ್ವರ ದೇವಸ್ಥಾನಕ್ಕೆ ತಲುಪಿದಾಗ ವೇಗವಾಗಿ ಬಂದ ಟ್ರಕ್ ವ್ಯಾನ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement. Scroll to continue reading.

ಮೃತರನ್ನು ಅರ್ಜುನಯ್ಯ, ನರಸಮ್ಮ ಮತ್ತು ಕಾವ್ಯ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಗಾಯಗೊಂಡ ಇತರ ಎಂಟು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!