ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ವಾರಂಬಳ್ಳಿ ಗ್ರಾಮ ಪಂಚಾಯತ್ ಬಳಿ ಓಂಕಾರ್ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಕಚೇರಿ ಮತ್ತು ಗ್ರಾಹಕ ಸೇವಾ ಕೇಂದ್ರ ಬುಧವಾರ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ ಕಛೇರಿಯನ್ನು ಉದ್ಘಾಟಿಸಿದರು.
ಬಳಿಕ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಎನ್ ಆರ್ ಎಲ್ ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಮಾತನಾಡಿ, ಓಂಕಾರ್ ಸಂಜೀವಿನಿ ಒಕ್ಕೂಟದ ಮಹಿಳೆಯರು ರಾಷ್ಟ್ರೀಯ ಹೆದ್ದಾರಿ ಬಳಿಸಂಜೀವಿನಿ ಕೆಫೆ ಮಾಡಿ ಗಮನಸೆಳೆದು ಯಶಸ್ವಿಯಾಗಿ ಇನ್ನಿತರ ಎಲ್ಲಾ ಸಂಘದವರಿಗೆ ಮಾದರಿ ಎಂದರು.
ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸದಾನಂದ ಪೂಜಾರಿ,
ಏಕವ್ಯಕ್ತಿ ಸಮಾಲೋಚಕ ಪಾಂಡುರಂಗ, ಓಂಕಾರ್ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷೆ ಬೇಬಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶೇಖರನಾಯ್ಕ , ವಲಯ ಮೇಲ್ವಿಚಾರಕ ಸಂತೋಷ್ , ಒಕ್ಕೂಟದ ಕಾರ್ಯದರ್ಶಿ ರೇಖಾ , ಬಿ.ಸಿ ಸಖಿ ಅರ್ಚನಾ ಮತತು ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.
