ಹುಬ್ಬಳ್ಳಿ : ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದ್ವೇಷ ಭಾಷಣವನ್ನು ನಿಯಂತ್ರಿಸುವ ಬಗ್ಗೆ ಸಮಿತಿ ರಚಿಸಲು ಸರ್ವೋಚ್ಚ ನ್ಯಾಯಾಲಯವು ಸೂಚಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರು, ಇಡೀ ದೇಶದಲ್ಲಿ ದ್ವೇಷ ಭಾಷಣ ನಡೆಯುತ್ತಲಿದೆ.
Advertisement. Scroll to continue reading.
ವಿಶೇಷವಾಗಿ ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಹೆಚ್ಚಾಗುತ್ತಲಿದೆ. ಅದಕ್ಕೆ ನಿಯಂತ್ರಣ ಹಾಕಲು ನ್ಯಾಯಾಲಯದ ಆದೇಶಗಳನ್ನು ಮಾರ್ಗಸೂಚಿಗಳಂತೆ ಪಾಲಿಸಲಾಗುವುದು ಎಂದರು.