ಬೆಂಗಳೂರು: ರಾಜ್ಯ ಸರ್ಕಾರದಿಂದ 545 ಪಿಎಸ್ಐ ನೇಮಕಾತಿಗಾಗಿ ನಡೆದಿದ್ದಂತ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಈ ವಿಚಾರ ಸದ್ಯ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಪರೀಕ್ಷೆ ರದ್ದು ಪಡಿಸಿ, ಮರು ಪರೀಕ್ಷೆ ನಡೆಸುವಂತ ನಿರ್ಧಾರವನ್ನು ಪ್ರಕಟಿಸಿತ್ತು. ಇದೀಗ ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಆಯ್ಕೆ ಪಟ್ಟಿಯಲ್ಲಿದ್ದಂತಹ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಅಂದಹಾಗೇ ಇದೀಗ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದೆ. ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕೂಡ ಅರೆಸ್ಟ್ ಮಾಡಲಾಗಿದೆ.

ಈ ಬೆನ್ನಲ್ಲೇ ರಾಜ್ಯ ಸರ್ಕಾರ 545 ಪಿಎಸ್ಐ ನೇಮಕಾತಿ ಪರೀಕ್ಷೆಯನ್ನೇ ರದ್ದು ಮಾಡಲಾಗಿದ್ದು, ಈಗ ಮತ್ತೊಮ್ಮೆ ಪರೀಕ್ಷೆ ನಡೆಸೋ ಮಹತ್ವದ ನಿರ್ಧಾರವನ್ನು ಕೈಗೊಂಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ, ಇದೀಗ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮರು ಪರೀಕ್ಷೆ ಮಾಡದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಕೋರ್ಟ್ ಮುಂದೆ ಜಮಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
