ಬೆಂಗಳೂರು : ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಜೀವ ಬಲಿಯಾಗಿದೆ. ಬಿಬಿಎಂಪಿ ಕಸದ ಲಾರಿ ಹರಿದು ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಯಾದಗಿರಿ ಜಿಲ್ಲೆ ಸುರಪುರ ಮೂಲದ 25 ವರ್ಷದ ಯುವಕ ದೇವಣ್ಣ ಮೃತಪಟ್ಟವನು. ಲಾರಿ ಚಾಲಕ ಆರೋಪಿ ಚಾಲಕ ದಿನೇಶ್ ನಾಯ್ಕ್(40)ನನ್ನು ಬಂಧಿಸಲಾಗಿದೆ.
ಧಣಿಸಂದ್ರ ರೈಲ್ವೆ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದ್ದು, ಡೆಲಿವರಿ ಬಾಯ್ ವೃತ್ತಿ ನಿರ್ವಹಿಸುತ್ತಿದ್ದ ದೇವಣ್ಣ ಇಂದು ಕಸದ ಲಾರಿಗೆ ಬಲಿಯಾಗಿದ್ದಾನೆ.
Advertisement. Scroll to continue reading.