Connect with us

Hi, what are you looking for?

Diksoochi News

ಸಿನಿಮಾ

ರಸ್ತೆ ಅಪಘಾತದಲ್ಲಿ ಕರಿಯ ಚಿತ್ರದ ನಿರ್ಮಾಪಕ ಆನೇಕಲ್ ಬಾಲರಾಜ್ ನಿಧನ

0

ಬೆಂಗಳೂರು : ಕನ್ನಡದ ಕರಿಯ, ಗಣಪ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದ ನಿರ್ಮಾಪಕ ಆನೇಕಲ್ ಬಾಲರಾಜ್ (58) ಇಂದು ಮೃತಪಟ್ಟಿದ್ದಾರೆ.

ಆನೇಕಲ್ ಬಾಲರಾಜ್ ಅವರು ವಾಕಿಂಗ್ ಮಾಡಲು ತೆರಳುತ್ತಿದ್ದಾಗ ಅವರಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಫುಟ್ ಪಾತ್ ಮೇಲೆ ಬಿದ್ದ ಅವರಿಗೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿರ್ಮಾಪಕ ಆನೇಕಲ್ ಬಾಲರಾಜ್ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಅನೇಕಲ್ ಬಾಲರಾಜ್ ಅವರು ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದರು. ಪ್ರೇಮ್ ನಿರ್ದೇಶನದ ‘ಕರಿಯಾ’, ಶ್ರೀನಿವಾಸ್ ಪ್ರಭು ನಿರ್ದೇಶನ ಮಾಡಿದ್ದ ‘ಕರಿಯಾ 2’, ‘ಗಣಪ’ ಸೇರಿದಂತೆ ಅನೇಕ ಸಿನಿಮಾಗಳನ್ನು ಆನೇಕಲ್ ಬಾಲರಾಜ್ ಅವರು ನಿರ್ಮಾಣ ಮಾಡಿದ್ದರು.

Advertisement. Scroll to continue reading.

ಅವರ ಪುತ್ರ ಸಂತೋಷ್ ಕೂಡ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸಂತೋಷ್ ನಟಿಸಿದ್ದ ‘ಕರಿಯ 2’ ಮತ್ತು ‘ಗಣಪ’ ಸಿನಿಮಾಗಳನ್ನು ಅನೇಕಲ್ ಬಾಲರಾಜ್ ನಿರ್ಮಾಣ ಮಾಡಿದ್ದಾರೆ. 

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!