ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ ಧಾರೆಗಳನ್ನು ಶಾಲಾ ಪಠ್ಯ ಪುಸ್ತಕಗಳಿಂದ ತೆಗೆದು ಹಾಕಿರೋದನ್ನು ಸರ್ವತ್ರ ಖಂಡಿಸ ಬೇಕಾಗಿದೆಯೆಂದು ಮಾಜಿ ಶಾಸಕ ಯು. ಆರ್. ಸಭಾಪತಿ ಹೇಳಿದ್ದಾರೆ.
ಬ್ರಹ್ಮಶ್ರೀ ನಾರಾಯಣ ಗುರುಗಳು ದೇಶದ ಉದ್ದಗಲಕ್ಕೂ ಸಂಚರಿಸಿ ಹಿಂದುಳಿದ, ಶೋಷಿತವರ್ಗದ ಜನರನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರು ಕೇವಲ ಬಿಲ್ಲವ ಸಮಾಜಕ್ಕೆ ಮಾತ್ರ ಸೀಮಿತವಾಗಿರದೆ ಸರ್ವ ಶೋಷಿತ ವರ್ಗಗಳ ಆಶಾಕಿರಣ ವಾಗಿದ್ದರು.
ಹಿಂದಿನ ಕಾಂಗ್ರೆಸ್ ಪಕ್ಷದ ಕೇಂದ್ರ ಸರಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಿಗಾಗಿ ಅಂಚೆಚಿಟಿಯನ್ನು ಬಿಡುಗಡೆ ಮಾಡಿರೋದನ್ನು ಸಭಾಪತಿ ನೆನಪಿಸಿದ್ದಾರೆ.
Advertisement. Scroll to continue reading.

ಹೀಗಿರುವಾಗ ರಾಜ್ಯದ ಬಿಜೆಪಿ ಸರಕಾರ ಶಾಲಾ ಪಠ್ಯಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಧಾರೆಗಳನ್ನು ತೆಗೆದು ಹಾಕುವ ಕೆಲಸ ಮಾಡಿದಲ್ಲಿ ಮುಂದೆ ಕಾಂಗ್ರೆಸ್ ಪಕ್ಷ ಉಗ್ರ ಹೋರಾಟ ಮಾಡಬೇಕಾಗಬಹುದೆಂದು ಸಭಾಪತಿ ಎಚ್ಚರಿಸಿದ್ದಾರೆ.
In this article:Diksoochi news, diksoochi Tv, diksoochi udupi, Narayana guru, U.R.Sabhapathi
Click to comment

































