ಬೆಂಗಳೂರು: ರಾಜ್ಯದ ಜನತೆ ಈಗಾಗಲೇ ಭಾರೀ ಮಳೆಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಆದರೆ,ಮಳೆ ಮುಂದುವರೆಯಲಿರುವ ಸೂಚನೆ ಸಿಕ್ಕಿಸೆ. ಮತ್ತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಹಾಗಾಗಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಶನಿವಾರ ಮತ್ತು ಭಾನುವಾರ ಮಳೆ ಕೊಂಚ ತಗ್ಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, rain, rain in karnataka
Click to comment

































