ಕೊಲ್ಲಂ: ವೈದ್ಯೆ ವಿಸ್ಮಯಾ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಪತಿ ಕಿರಣ್ ಕುಮಾರ್ ದೋಷಿ ಎಂದು ತೀರ್ಪು ನೀಡಿರುವ ಕೊಲ್ಲಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ. ಪ್ರಕರಣದಲ್ಲಿ ಆರೋಪಿ ಕಿರಣ್ಗೆ 12 ಲಕ್ಷದ ಐವತ್ತು ಸಾವಿರ ರೂಪಾಯಿ ದಂಡವನ್ನು ನ್ಯಾಯಾಲಯ ವಿಧಿಸಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಬಿ), 498 (ಎ), ಮತ್ತು 306 ಮತ್ತು ವರದಕ್ಷಿಣೆ ನಿಷೇಧ ಕಾಯಿದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಕಿರಣ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ 22ರ ಹರೆಯದ ವಿಸ್ಮಯಾ ತನ್ನ ಗಂಡನ ಮನೆಯಿಂದ ಅನುಭವಿಸಿದ ದೈಹಿಕ ಮತ್ತು ಮಾನಸಿಕ ಹಿಂಸೆಯೇ ಆಕೆಯ ಆತ್ಮಹತ್ಯೆಗೆ ಕಾರಣವಾಯಿತು ಎಂದು ನ್ಯಾಯಾಲಯ ಪರಿಗಣಿಸಿದೆ.
Advertisement. Scroll to continue reading.

ವಿಸ್ಮಯಾ ಸಾವಿನ ಆಕ್ರೋಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಲ್ಲಿ ಸಹಾಯಕ ಮೋಟಾರು ವಾಹನ ನಿರೀಕ್ಷಕರಾಗಿದ್ದ ಕಿರಣ್ ಕುಮಾರ್ ಅವರನ್ನು ಈಗಾಗಲೇ ಸೇವೆಯಿಂದ ವಜಾಗೊಳಿಸಲಾಗಿತ್ತು.
In this article:Diksoochi news, diksoochi Tv, diksoochi udupi, kerala, Vismaya Suicide case

Click to comment