ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ(ರಿ)ರಾಜ್ಯಾಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ 12 ಭಾನುವಾರ ಬೆಳಿಗ್ಗೆ 9.30 ಗಂಟೆಗೆ ಕೋಟಕ್ಕೆ ಆಗಮಿಸಲಿದ್ದಾರೆ.
ಕೋಟ ಮಾಂಗಲ್ಯ ಮಂದಿರದಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಕೋಟ ಹೋಬಳಿಯ ಯುವಘಟಕ ಉದ್ಘಾಟನೆ,ವಿಶ್ವಕರ್ಮ
ಸಮಾಜದ ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ, ಎಸ್.ಎಸ್.ಎಲ್.ಸಿ ಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಶ್ರೀಯುತ ಕೆ.ಪಿ.ನಂಜುಂಡಿಯವರು ನೇರವೇರಿಸಲಿದ್ದಾರೆ.ಇವರ ಜೊತೆ ರಾಜ್ಯ ಯುವಘಟಕಾಧ್ಯಕ್ಷ ಶ್ರೀನಿವಾಸ ಮಳವಳ್ಳಿಯವರು ಕೈ ಜೋಡಿಸಲಿದ್ದಾರೆ.
Advertisement. Scroll to continue reading.

ತದನಂತರ ಮಧ್ಯಾಹ್ನ 3.30 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಸಂಘಟನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.