Connect with us

Hi, what are you looking for?

Diksoochi News

ರಾಜ್ಯ

ಎನ್ ಟಿ ಪಿ ಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಕಲ್ಲಿದ್ದಲು ಸಾಗಾಣಿಕ ಯಂತ್ರ

0

ವಿಜಯಪುರ : ಎನ್ ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಭೀಕರ ಅಗ್ನಿ ಅವಘಢ ಸಂಭವಿಸಿದ್ದು, ಕಲ್ಲಿದ್ದಲು ಸಾಗಾಣಿಕೆಯ ಯಂತ್ರ ಹೊತ್ತಿ ಉರಿದಿರುವ ಘಟನೆ ನಿಡಗುಂದಿ ತಾಲೂಕಿನ ಕೂಡಗಿಯಲ್ಲಿ ನಡೆದಿದೆ.
ಕೂಡಗಿ ಬಳಿಯ ಎನ್ ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕಲ್ಲಿದ್ದಲು ಘಟಕದ ಬಳಿ ಕಲ್ಲಿದ್ದಲು ಸಾಗಾಣಿಕೆಯ ಯಂತ್ರದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಯಂತ್ರ ಹೊತ್ತಿ ಉರಿದಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!