ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ಹೊಸ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದೆ.
ಈ ಹೊಸ ಮಾರ್ಗಸೂಚಿಯಂತೆ ರಾಜ್ಯಾದ್ಯಂತ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
Advertisement. Scroll to continue reading.

ರಾಜ್ಯದಲ್ಲಿ ಕಳೆದ 10 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿವೆ. ಹೀಗಾಗಿ ಈ ಕೆಳಗಿನ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದ್ದಾರೆ.
ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿ ಕ್ರಮಗಳು :
- ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
- ಮಾಸ್ಕ್ ಧರಿಸದೇ ಇದ್ದರೇ ಮಾರ್ಷಲ್, ಪೊಲೀಸ್ ಸಿಬ್ಬಂದಿಗಳು ದಂಡ ವಿಧಿಸಲು ಸೂಚನೆ
- ಮುಚ್ಚಿದ ಕಫೆ ಟೀರಿಯಾ, ಹೋಟೆಲ್, ಶೈಕ್ಷಣಿಕ ಸಂಸ್ಥೆಗಳು, ಮಾಲ್ ಗಳು, ರೆಸ್ಟೋರೆಂಟ್ ಗಳು, ಪಬ್ ಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಜನರು, ಸಿಬ್ಬಂದಿಗಳು ಮಾಸ್ಕ್ ಧರಿಸುವುದು ಕಡ್ಡಾಯ.
- ಮಾಸ್ಕ್ ಧರಿಸಿದ ಜನರಿಗೆ ಮಾತ್ರವೇ ಮುಚ್ಚಿದ ಸ್ಥಳಗಳಲ್ಲಿನ ಪ್ರದೇಶಗಳಿಗೆ ಅನುಮತಿ
- ಸ್ವಂತ ವಾಹನಗಳು ಹಾಗು ಸಾರ್ವಜನಿಕ ಸಾರಿಗೆಗಳಲ್ಲಿ ( ಬಸ್ ಮತ್ತು ರೈಲು ) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯ
- ಐಎಲ್ಐ ಮತ್ತು ಸಾರಿ ಲಕ್ಷಣಗಳನ್ನು ಹೊಂದಿರುವವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರೋರು ಆದ್ಯತೆ ಮೇರೆಗೆ ಪರೀಕ್ಷೆ ಒಳಪಡಲು ಸೂಚನೆ
- ಅರ್ಹ ಜನರೆಲ್ಲರೂ ಪ್ರಿಕಾಷನರಿ ಡೋಸ್ ಸೇರಿದಂತೆ, ಕೋವಿಡ್ ಲಸಿಕೆ ಪಡೆಯಲು ಸೂಚನೆ
ಈ ಮೇಲ್ಕಂಡ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ರಾಜ್ಯ ಆರೋಗ್ಯ ಇಲಾಖೆ ಹೇಳಿದೆ. ಇಲ್ಲವಾದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.
Advertisement. Scroll to continue reading.
