Connect with us

Hi, what are you looking for?

Diksoochi News

ರಾಷ್ಟ್ರೀಯ

ದಕ್ಷಿಣ ಪದವೀಧರ ಕ್ಷೇತ್ರ : ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ. ಮಾದೇಗೌಡ ಭರ್ಜರಿ ಗೆಲುವು

1

ಮೈಸೂರು: ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಪ್ರತಿಸ್ಪರ್ಧಿ ಬಿಜೆಪಿತ ಮೈ.ವಿ ರವಿಶಂಕರ್‌ ವಿರುದ್ಧ ಗೆದ್ದು ಮೇಲ್ಮನೆ ಪ್ರವೇಶಿಸಿದ್ದಾರೆ. 12,205 ಮತಗಳ ಭಾರಿ ಅಂತರದಿಂದ ಅವರು ಗೆದ್ದಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಖಾಲಿಯಿದ್ದ 4 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ದಕ್ಷಿಣ ಪದವೀಧರರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯುವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳಿಗೆ ಜೂ. 13 ರಂದು ಚುನಾವಣೆ ನಡೆದಿತ್ತು.

ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ 45,275 ಮತಗಳನ್ನು ಪಡೆದಿದ್ದರು. ನಿಗದಿತ ಕೋಟಾ ತಲುಪಲು (46083) 808 ಮತಗಳ ಕೊರತೆ ಎದುರಾಯಿತು.

Advertisement. Scroll to continue reading.

ಆಗ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತಿಸ್ಪರ್ಧಿ ಮೈ.ವಿ. ರವಿಶಂಕರ್ ಅವರ ಮತಪತ್ರದಲ್ಲಿ ಅಗತ್ಯವಿರುವ 808 ಮತಗಳು ಬರುವವರೆಗೆ ಮಾತ್ರವೇ ಎಣಿಕೆ ಪ್ರಕ್ರಿಯೆಯನ್ನು ಮುಂದುವರಿಸಿ ಮಧು ಜಿ. ಮಾದೇಗೌಡರನ್ನು ವಿಜೇತ ಎಂದು ಘೋಷಿಸಲಾಯಿತು.

ಬಿಜೆಪಿಯ ಮೈ.ವಿ.‌ರವಿಶಂಕರ್ 33,878 ಮತಗಳನ್ನು ಗಳಿಸಿ 2ನೇ ಸ್ಥಾನ ಪಡೆದರು.

ಬುಧವಾರ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿ ಗುರುವಾರ ಮಧ್ಯಾಹ್ನ 1ರ ಸುಮಾರಿಗೆ ಮುಕ್ತಾಯವಾಯಿತು. ಫಲಿತಾಂಶಕ್ಕಾಗಿ ನಿರಂತರ 29 ಗಂಟೆಗಳವರೆಗೆ ಪ್ರಕ್ರಿಯೆ ನಡೆಯಿತು. ಈ ಕ್ಷೇತ್ರದಲ್ಲಿ ಇಷ್ಟು ಸುದೀರ್ಘ ಸಮಯದವರೆಗೆ ಮತ ಎಣಿಕೆ ಕಾರ್ಯ ನಡೆದದ್ದು ಇದೇ ಮೊದಲ ಬಾರಿಯಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!