ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ದೇಶಾದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಉತ್ತರ ಪ್ರದೇಶದಿಂದ ದೆಹಲಿ, ಹರಿಯಾಣ, ರಾಜಸ್ಥಾನ, ಬಿಹಾರ, ಬಂಗಾಳ, ತೆಲಂಗಾಣದವರೆಗೆ ಪ್ರತಿಭಟನೆಗಳು ನಡೆಯುತ್ತಿದ್ದು, ಹಿಂಸಾಚಾರಕ್ಕೆ ತಿರುಗಿದೆ.
ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಈ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದು, ಭಾರತೀಯ ವಾಯುಪಡೆಯಲ್ಲಿ ‘ಅಗ್ನಿಪಥ್ ಸ್ಕೀಮ್’ ಅಡಿಯಲ್ಲಿ ಅಗ್ನಿವೀರರ ನೇಮಕಾತಿ ಜೂನ್ 24 ರಿಂದ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.
ನೇಮಕಾತಿಗಾಗಿ ಗರಿಷ್ಠ ವಯೋಮಿತಿಯನ್ನು 23 ವರ್ಷಗಳಿಗೆ ಪರಿಷ್ಕರಿಸಲಾಗಿದೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಇದರಿಂದ ಯುವಕರಿಗೆ ಅನುಕೂಲವಾಗಲಿದೆ. ಭಾರತೀಯ ವಾಯುಪಡೆಯ ನೇಮಕಾತಿ ಪ್ರಕ್ರಿಯೆ ಜೂನ್ 24 ರಿಂದ ಪ್ರಾರಂಭವಾಗಲಿದೆ’ ಎಂದು ಅವರು ಹೇಳಿದ್ದಾರೆ.
Advertisement. Scroll to continue reading.

https://twitter.com/ANI/status/1537693670203305984?t=nw9MspGgKYTZJ62gH15tUA&s=19
In this article:Agnipath scheme, Diksoochi news, diksoochi Tv, diksoochi udupi, V.R.Choudary

Click to comment