Connect with us

Hi, what are you looking for?

Diksoochi News

ರಾಜ್ಯ

ಮಾಜಿ ಸಚಿವ ಎಂ.ರಘುಪತಿ ನಿಧನ

1

ಬೆಂಗಳೂರು: ರಾಜ್ಯದ ಮಾಜಿ ಶಿಕ್ಷಣ ಸಚಿವ, ಹಿರಿಯ ನಾಯಕ ಎಂ.ರಘುಪತಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ರಘುಪತಿ ಬಳಲುತ್ತಿದ್ದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.


ಅವರು ಶನಿವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮಲ್ಲೇಶ್ವರಂನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ.

Advertisement. Scroll to continue reading.

ಜನತಾ ಪರಿವಾರದ ಹಿರಿಯ ರಾಜಕೀಯ ನಾಯಕರಾಗಿದ್ದ ಎಂ.ರಘುಪತಿ ಶಿವಾಜಿ ನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಅಯ್ಕೆಯಾಗಿದ್ದರು. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಶಿಕ್ಷಣ ಸಚಿವರಾಗಿದ್ದಾಗ ಸರ್ಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರವನ್ನು ರಘುಪತಿ ಅವರೇ ಪರಿಚಯಿಸಿದ ಖ್ಯಾತಿ ಇವರಿಗೆ ಸಲ್ಲುತ್ತದೆ.

ಇನ್ನು ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!