Connect with us

Hi, what are you looking for?

Diksoochi News

ರಾಜ್ಯ

ಸಾರ್ವಜನಿಕರ ಎದುರೇ ಬಸ್ ಏಜೆಂಟ್ ನ ಬರ್ಬರ ಹತ್ಯೆ

3

ದಾವಣಗೆರೆ : ಖಾಸಗಿ ಬಸ್ ಏಜೆಂಟ್ ಒಬ್ಬರನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚನ್ನಗಿರಿ ಪಟ್ಟಣದ ತರಳಬಾಳು ವೃತ್ತದಲ್ಲಿ ನಡೆದಿದೆ.

ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಹತ್ಯೆಗೀಡಾದ ಏಜೆಂಟ್. ನಲ್ಲೂರಿನಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಸಲೀಂ ಎಂಬಾತ ಕೊಲೆ ಮಾಡಿದ್ದಾನೆ.

ಎಂದಿನಂತೆ ನಲ್ಲೂರಿನಿಂದ ಚನ್ನಗಿರಿಗೆ ಜಾಕೀರ್ ಬಂದಿದ್ದಾನೆ. ಜಾಕೀರ್ ಆಗಮಿಸುತ್ತಿದ್ದಂತೆ ಬೈಕ್ ನಲ್ಲಿ ಬಂದ ಸಲೀಂ ಏಕಾಏಕಿ ಜಾಕೀರ್ ಗೆ ಚಾಕುವಿನಿಂದ ಇರಿದಿದ್ದಾನೆ. ರಕ್ತಸಿಕ್ತವಾಗಿ ಬಿದ್ದ ಬಳಿಕವೂ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

Advertisement. Scroll to continue reading.

ಹತ್ಯೆ ಮಾಡಿದ ಆರೋಪಿ ಚನ್ನಗಿರಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾ‌ನೆ.

ಅನೈತಿಕ ಸಂಬಂಧ ಅಥವಾ ಆಸ್ತಿ ವಿವಾದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ‌. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!