ನವದೆಹಲಿ : ಜಂಟಿ ಪ್ರತಿಪಕ್ಷ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉಪಸ್ಥಿತರಿದ್ದರು.
ಈ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ನ ಫಾರೂಕ್ ಅಬ್ದುಲ್ಲಾ, ಆರ್ಎಲ್ಡಿಯ ಜಯಂತ್ ಸಿನ್ಹಾ, ಸಿಪಿಐ(ಎಂ) ನ ಸೀತಾರಾಮ್ ಯೆಚೂರಿ ಮತ್ತು ತೆಲಂಗಾಣ ಸಚಿವ ಮತ್ತು ಟಿಆರ್ಎಸ್ ನಾಯಕ ಕೆ.ಟಿ.ರಾಮರಾವ್ ಮೊದಲಾದವರು ಉಪಸ್ಥಿತರಿದ್ದರು
Advertisement. Scroll to continue reading.