Connect with us

Hi, what are you looking for?

Diksoochi News

ರಾಜ್ಯ

ಪ್ರಿಯತಮೆ ದೂರಾಗಿದ್ದಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡ ಯುವಕ!

1

ಶಿವಮೊಗ್ಗ : ಭಗ್ನ ಪ್ರೇಮಿಯೊಬ್ಬ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ.

ಮೂಲತಃ ಹಾಸನ ಜಿಲ್ಲೆ ಅರಸೀಕೆರೆಯ ದಿಲೀಪ್ ಹೀಗೆ ಸಾವಿಗೆ ಶರಣಾಗಿರುವ ಭಗ್ನ ಪ್ರೇಮಿ. ಆತ ಬೆಂಗಳೂರಿನ ಗಾರ್ಮೆಂಟ್ಸ್‌ವೊಂದರಲ್ಲಿ ಅಸಿಸ್ಟೆಂಟ್ ಕ್ವಾಲಿಟಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ.

ದಿಲೀಪ್ ತನ್ನದೇ ಗಾರ್ಮೆಂಟ್ಸ್‌ನಲ್ಲಿ ಸ್ಯಾಂಪಲ್ ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಈ ನಡುವೆ ಪೋಷಕರ ಒತ್ತಡಕ್ಕೆ ಮಣಿದು ಕಳೆದೊಂದು ತಿಂಗಳ ಹಿಂದೆ ಊರಿಗೆ ವಾಪಸ್ಸು ಹೋಗಿದ್ದ ಆ ಹುಡುಗಿ, ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ.

Advertisement. Scroll to continue reading.

ಈ ನಡುವೆ ದಿಲೀಪ್‌ಗೆ ತನ್ನ ಪ್ರಿಯತಮೆ ಬೇರೆಯವರ ಜೊತೆಗೆ ಮದುವೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯುವತಿ ವಾಸವಿರುವ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮಕ್ಕೆ ತೆರಳಿ, ಅಲ್ಲಿನ ಕೆರೆ ಏರಿ ಮೇಲೆ ವಿಷ ಕುಡಿದು ಆತ್ಮಹತ್ಯೆಯನ್ನು ದಿಲೀಪ್‌ ಮಾಡಿಕೊಂಡಿದ್ದಾನೆ. ವಿಷ ಕುಡಿಯುವ ಮೊದಲು ಸೆಲ್ಫಿ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ.

ಇನ್ನು ಈತನನ್ನು ಗಮನಿಸಿದ ಸ್ಥಳೀಯರು, ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!