Connect with us

Hi, what are you looking for?

Diksoochi News

ರಾಜ್ಯ

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಹತ್ಯೆ!

2

ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ  ಗುರೂಜಿ ಚಂದ್ರಶೇಖರ್‌ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಹತ್ಯೆಯಾಗಿದ್ದಾರೆ. ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.

ಹೋಟೆಲ್‌ ನಲ್ಲಿ ರಿಸಪ್ಶನ್‌ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಭೇಟಿ ನೀಡಿದ್ದಾರೆ. ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Advertisement. Scroll to continue reading.

ಸರಳ ವಾಸ್ತು ಸಲಹೆ ನೀಡುತ್ತಿದ್ದ, ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುತ್ತಿದ್ದರು.

ಈವರೆಗೂ 2 ಸಾವಿರಕ್ಕೂ ಅಧಿಕ ಸೆಮಿನಾರ್‌ಗಳಲ್ಲಿ ಮಾತನಾಡಿರುವ ಚಂದ್ರಶೇಖರ್‌, ಈವರೆಗೂ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿಯನ್ನೂ ಅವರು ಪಡೆದಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!