ಬೈಂದೂರು : ಗುಲ್ವಾಡಿ ಗ್ರಾಮಕ್ಕೆ ಹೊಳೆದಂಡೆ ಯೋಜನೆ ಕಾಮಗಾರಿ ಅಗಸ್ಟ್ ನಲ್ಲಿ ಆರಂಭ : ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ
Published
1
ವರದಿ : ದಿನೇಶ್ ರಾಯಪ್ಪನಮಠ
ಬೈಂದೂರು : ಸತತ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹಕ್ಕೆ ಸಿಲುಕಿದ ಗುಲ್ವಾಡಿ ಗ್ರಾಮದ ಕುಚ್ಚಟ್ಟು ಪ್ರದೇಶದ ಮನೆಗಳಿಗೆ ಭೇಟಿ ನೀಡಿದರು.
ಈ ವೇಳೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಸ್ಥಳಕ್ಕೆ ಬೋಟ್ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಈ ಭಾಗದ ಮೂರು ದಶಕಗಳ ಬೇಡಿಕೆಯಾಗಿರುವ ಹೊಳೆದಂಡೆ ಯೋಜನೆಗೆ ಈಗಾಗಲೇ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಅಗಸ್ಟ್ ನಲ್ಲಿ ಕೆಲಸ ಆರಂಭವಾಗಲಿದೆ. ಶಾಶ್ವತ ಪರಿಹಾರಕ್ಕೆ ಇನ್ನೂ 2 ಕೋಟಿ ಅನುದಾನದ ಅಗತ್ಯವಿದ್ದು, ಆದಷ್ಟು ಶೀಘ್ರವಾಗಿ ಈ ಭಾಗದ ಜನರ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.