ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ಟಿಪ್ಪರ್ ಲಾರಿಗೆ ಮತ್ತೊಂದು ಬಲಿಯಾಗಿದೆ. ವಿಜಯಕಲಾ ಮೃತ ಮಹಿಳೆ.
ನಾಗರಭಾವಿ ರಸ್ತೆಯಲಿ ಬೆಳಗ್ಗೆ 9.50ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ದ್ವಿಚಕ್ರ ವಾಹನದಲ್ಲಿ ಪತಿ ಯೋಗೇಂದ್ರ ಜೊತೆ ವಿಜಕಲಾ ಹೋಗುತ್ತಿದ್ದರು.
Advertisement. Scroll to continue reading.

ಈ ವೇಳೆ ಹಿಂಬದಿಯಿಂದ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಹೀಗಾಗಿ ಬೈಕ್ ಹಿಂಬದಿ ಕುಳಿತಿದ್ದ ವಿಜಯಕಲಾಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಗದೆ ಮಹಿಳೆ ಸಾವನ್ನಪ್ಪಿದ್ದಾರೆ.
ಮಧ್ಯಾಹ್ನ12.30ರ ಸುಮಾರಿಗೆ ಮಹಿಳೆ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಬೈಕ್ ಸವಾರ ಯೋಗೆಂದ್ರಗೂ ಗಾಯಗಳಾಗಿದ್ದು, ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.
