ಕೊಲೋಂಬೋ : ಶ್ರೀಲಂಕಾ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ಮಾಲ್ಡೀವ್ಸ್ ಗೆ ಪಲಾಯನ ಮಾಡಿದ ನಂತರ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಹಂಗಾಮಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಇದೇ ವೇಳೆ ಪ್ರಧಾನಿ ಕಚೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು ಕಟ್ಟಡಕ್ಕೆ ಮುತ್ತಿಗೆ ಹಾಕಿದ್ದಾರೆ.
ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡ ನಂತರವೇ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ಪಿಎಂ ಕಚೇರಿ ಈ ಹಿಂದೆ ಸರಿಪಡಿಸಿತ್ತು. ಆದರೂ ಕರ್ಫ್ಯೂ ಜಾರಿಯಲ್ಲಿತ್ತು. ಇನ್ನು ಗಲಭೆಯಲ್ಲಿ ತೊಡಗಿರುವ ಜನರನ್ನು ಬಂಧಿಸುವಂತೆ ಪ್ರಧಾನಿ ಭದ್ರತಾ ಪಡೆಗಳಿಗೆ ಆದೇಶ ನೀಡಿದ್ದಾರೆ.
Advertisement. Scroll to continue reading.