ಗಂಗೊಳ್ಳಿ : ನೀರಿನ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮದ ಕಾಳಿಕಾಂಬ ನಗರದಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಸಂಗಪ್ಪ(38) ಮೃತಪಟ್ಟವರು.
ಅಲೂರು ಗ್ರಾಮದ ಸುಭಾಸ ಶೆಟ್ಟಿ ಎಂಬವರ ಮನೆಯಲ್ಲಿ ಸಂಗಪ್ಪ ಕೃಷಿ ಕೆಲಸ ಮಾಡಿಕೊಂಡಿದ್ದು, ಸುಭಾಸ್ ಶೆಟ್ಟಿ ಯವರ ಮನೆಯ ಬಳಿ ಶೆಡ್ನಲ್ಲಿ ವಾಸವಾಗಿದ್ದರು.
ನಿನ್ನೆ ಮಧ್ಯಾಹ್ನ ಕೃಷಿ ಕೆಲಸ ಮಾಡಿ, ಅಲ್ಲೇ ಇದ್ದ ನೀರಿನ ಹೊಂಡಕ್ಕೆ ಕೈ ಕಾಲು ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.