ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಹೆಬ್ರಿ ಪರಿಸರದಲ್ಲಿ ನಿರಂತರ ವಿದ್ಯುತ್ ನಿಲುಗಡೆ ಹಾಗೂ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಬಗ್ಗೆ ಎರಡು ಇಲಾಖೆಯಿಂದ ಜನಸಾಮಾನ್ಯರಿಗೆ ಆಗುವ ತೊಂದರೆ ವಿರುದ್ಧ ಹೆಬ್ರಿಯಲ್ಲಿ ಮಂಗಳವಾರ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಡೆಯಿತು.
ಹೆಬ್ರಿ ಸಿಟಿ ಲಯನ್ಸ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಶ್ರೀಕಾಂತ ಪೂಜಾರಿ ಕುಚ್ಚೂರು, ಪ್ರವೀಣ್ ಚಂದ್ರ ಮೂಡುಬಿದಿರೆ, ರಮೇಶ್ ಕುಂದಾಪುರ ಮಾತನಾಡಿದರು.
Advertisement. Scroll to continue reading.

ನಂತರ ಅರಣ್ಯ ಇಲಾಖೆ ಕಚೇರಿಗೆ ತೆರಳಿ ವಲಯ ಅರಣ್ಯಾಧಿಕಾರಿಗೆ ಮತ್ತು ಮೆಸ್ಕಾಂ ಅಧಿಕಾರಿಗಳಿಗೆ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಮನವಿ ನೀಡಲಾಯಿತು.
ಪ್ರತಿಭಟನೆಯಲ್ಲಿ ಪಕ್ಷದ ವಿವಿಧ ಘಟಕಗಳ ಪ್ರಮುಖರು ಕಾರ್ಯಕರ್ತರು ಭಾಗವಹಿಸಿದ್ದರು.
In this article:congress protest, Diksoochi news, diksoochi Tv, diksoochi udupi, hebri

Click to comment