ಉಡುಪಿ : ಹಿರಿಯ ಚಿಂತಕ, ಸಾಹಿತಿ, ಖ್ಯಾತ ವಿಮರ್ಶಕರಾಗಿದ್ದ ಜಿ. ರಾಜಶೇಖರ್ ಬುಧವಾರ ರಾತ್ರಿ 11:15 ಕ್ಕೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ರಾಜಶೇಖರ್ ಅವರು ಶ್ವಾಸಕೋಸದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ರಾಜಶೇಖರ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಜಿ. ರಾಜಶೇಖರ ಅವರು 1946ರಲ್ಲಿ ಜನಿಸಿದರು. ಉಡುಪಿಯಲ್ಲಿ ಪದವಿವರೆಗಿನ ವಿದ್ಯಾಭ್ಯಾಸ ನಡೆಸಿ ಕೆಲಕಾಲ ಶಿಕ್ಷಕರಾಗಿ ಕೆಲಸಮಾಡಿ ಎಲ್ಐಸಿಯಲ್ಲಿ ಉದ್ಯೋಗಸ್ಥರಾದರು. ಜಿ. ರಾಜಶೇಖರ ಅವರು ಸಾಹಿತ್ಯ-ಸಮಾಜ-ರಾಜಕಾರಣ ಹಾಗೂ ಕೋಮುವಾದವೂ ಸೇರಿದಂತೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆ ಬರೆದಿದ್ದಾರೆ.
ಕೃತಿಗಳು :
ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಬರ್ಟೊಲ್ಟ್ ಬ್ರೆಕ್ಟ್ ಪರಿಚಯ, ದಾರು ಪ್ರತಿಮ ನ ಪೂಜಿವೇ (ಅನುವಾದ), ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್ ಬರಹಗಳು (ಸಹಲೇಖಕ: ಕೆ. ಫಣಿರಾಜ್), ಬಹುವಚನ ಭಾರತ ಮಂತಾದವು
ಪ್ರಶಸ್ತಿ :

ರಾಜಶೇಖರ ಅವರು ತಮ್ಮ ‘ಬಹುವಚನ ಭಾರತ’ ಕೃತಿಗೆ 2015ರ ಸಾಲಿನಲ್ಲಿ “ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ್ದ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದರು.