ಹೆಬ್ರಿ : ಅನಾರೋಗ್ಯದಿಂದಾಗಿ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ನಿವಾಸಿ ಸುಶಾಂತ್ ಶೆಟ್ಟಿ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.
ಹೆಬ್ರಿ ತಾಲ್ಲೂಕು ಮುದ್ರಾಡಿಯ ಬಲ್ಲಾಡಿ ನಿವಾಸಿ ಆಗಿರುವ ಸುಶಾಂತ್ ಉಡುಪಿಯ ಫೈನಾನ್ಸೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳ ಹಿಂದೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ನೆನ್ನೆ ಜ್ವರ ತೀವ್ರಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಲಿ ಜ್ವರ ಎಂಬ ಶಂಕೆ ವ್ಯಕ್ತವಾಗಿದೆ. ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಮೃತರಿಗೆ ಈಗಾಗಲೇ ವಿವಾಹವಾಗಿದ್ದು ಒಂದು ವರ್ಷದ ಮಗುವಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Kabbaddi Player, Sushanth Shetty
Click to comment

































