ಹರಪನಹಳ್ಳಿ : ಡೀಸೆಲ್ ಟ್ಯಾಂಕರ್ ವೊಂದು ಹೊತ್ತಿ ಉರಿದು, ಬೈಕ್ ಸವಾರ ಸಜೀವ ದಹನವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ರೈಲ್ವೆಗೇಟ್ ಬಳಿ ನಡೆದಿದೆ.
ಹರಪನಹಳ್ಳಿ ರೈಲ್ವೆ ಗೇಟ್ ಬಳಿ ಡೀಸೆಲ್ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ. ಪರಿಣಾಮ ಬೈಕ್ ಸವಾರ ಸಜೀವ ದಹನವಾಗಿದ್ದಾರೆ. ಇನ್ನು, ಟ್ಯಾಂಕರ್ ಚಾಲಕ ಲಾರಿಯಿಂದ ಹಾರಿ ಬಚಾವ್ ಆಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ.
4 ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಹರಪನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement. Scroll to continue reading.