ಅದಮಾರು : ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಅದಮಾರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಅದಮಾರಿನ ವೀರಯೋಧ ಬಾಲಕೃಷ್ಣ ಟಿ. ಭಂಡಾರಿ ಮಾತನಾಡಿ, ಕಾರ್ಗಿಲ್ ಯುದ್ಧವು ದೇಶದ ವೀರತ್ವದ ಸಂಕೇತ. ಅತ್ಯಂತ ದುರ್ಗಮ ಪ್ರದೇಶಗಳಲ್ಲಿ ವೈರಿ ಪಡೆಗಳನ್ನು ಹಿಮ್ಮೆಟ್ಟಿಸಿ ಕಾರ್ಗಿಲ್ ಪ್ರದೇಶವನ್ನು ಮರಳಿ ಪಡೆಯುವಲ್ಲಿ ಭಾರತ ಯಶಸ್ವಿಯಾಗಿತ್ತು. ಇಂದಿನ ಯುವಜನರಲ್ಲೂ ಸೈನ್ಯಕ್ಕೆ ಸೇರುವ ತುಡಿತ ಜಾಗೃತಗೊಳ್ಳಬೇಕಾಗಿದೆ. ಇದೊಂದು ದೇಶ ಸೇವೆಗೆ ಇರುವಂತಹ ಅವಕಾಶ. ಯುವಶಕ್ತಿ ಅಗ್ನಿಪಥದ ಮೂಲಕ ಅಗ್ನಿವೀರಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಎಂ. ರಾಮಕೃಷ್ಣ ಪೈ ವಹಿಸಿದ್ದರು. ಸಂಸ್ಥೆಯ ನಿವೃತ್ತ ಹಿಂದಿ ಉಪನ್ಯಾಸಕ ಏಕನಾಥ ಡೊಂಗ್ರೆ, ಎನ್. ಎಸ್. ಎಸ್ ಕಾರ್ಯಕ್ರಮಾಧಿಕಾರಿ ಡಾ.ಜಯಶಂಕರ್ ಕಂಗಣ್ಣಾರು ಉಪಸ್ಥಿತರಿದ್ದರು.
ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಕೀರ್ತಿ ಸ್ವಾಗತಿಸಿದರು. ವಿದ್ಯಾರ್ಥಿ ನಾಯಕ ಆದಿತ್ಯ ವಂದಿಸಿದರು. ಕನ್ನಡ ಉಪನ್ಯಾಸಕ ದೇವಿ ಪ್ರಸಾದ್ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.



































