ಬೆಳಗಾವಿ: ನಿಂತಿದ್ದ ಶಾಲಾ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಖಾನಾಪುರ ರಸ್ತೆಯ ಮೀನು ಮಾರುಕಟ್ಟೆ ಬಳಿ ನಡೆದಿದೆ.
ಅರಹಾನ್ ಬೇಪಾರಿ (10) ಸಾವನ್ನಪ್ಪಿದ ವಿದ್ಯಾರ್ಥಿನಿ.
ಕ್ಯಾಂಪ್ ಪ್ರದೇಶದಲ್ಲಿರುವ ವೆಲಕಮ್ ಹೋಟೆಲ್ ಬಳಿ ಸ್ಕೂಟಿ ಮೇಲೆ ಶಾಲೆಗೆ ಹೋಗಲು ರಸ್ತೆ ಬದಿಗೆ ನಿಂತಿದ್ದವರ ಮೇಲೆ ಲಾರಿ ಹರಿದಿದೆ. ಪರಿಣಾಮ, ಮೃತಪಟ್ಟ ಬಾಲಕನ ಸಹೋದರಿ ಅತೀಕಾ ಬೇಪಾರಿ ಹಾಗೂ ಆಯುಷ್ಯ ಎಂಬವವರಿಗೆ ಗಂಭೀರ ಗಾಯವಾಗಿದೆ.
Advertisement. Scroll to continue reading.

ಗಾಯಾಳು ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆಯಿಂದ ಉದ್ರಿಕ್ತಗೊಂಡ ಜನರು ಕಲ್ಲು ತೂರಿ ಲಾರಿಯನ್ನು ಜಕ್ಕಂಗೊಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಸ್ನೇಹಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.
