Connect with us

Hi, what are you looking for?

Diksoochi News

Uncategorized

ಯುವವಾಹಿನಿ ಉಡುಪಿ ಘಟಕದಿಂದ “ಜೀವನ ಶೈಲಿ ಮತ್ತು ಒತ್ತಡ ನಿರ್ವಹಣೆ” ಮಾಹಿತಿ ಕಾರ್ಯಕ್ರಮ

0

ಉಡುಪಿ : ಯುವವಾಹಿನಿ ಉಡುಪಿ ಘಟಕದ ವತಿಯಿಂದ “ಜೀವನ ಶೈಲಿ ಮತ್ತು ಒತ್ತಡ ನಿರ್ವಹಣೆ” ಕುರಿತು ಮಾಹಿತಿ ಕಾರ್ಯಕ್ರಮ ಉದ್ಯಾವರದ ಬಲಾಯಿಪಾದೆ ಕಟಪಾಡಿ ಗರೋಡಿ ಮನೆ ನಾಗಪ್ಪ ಪೂಜಾರಿ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೇಂದ್ರ ಸಮಿತಿ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಅಶೋಕ್ ಕೋಟ್ಯಾನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡಷ್ಟೇ ಮಾನಸಿಕ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕಾದ್ದು ತೀರ ಅಗತ್ಯ. ಆ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ಅತ್ಯಂತ ಉಪಯುಕ್ತವಾದುದು” ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಡುಪಿ ದೊಡ್ಡಣಗುಡ್ಡೆಯ ಎ. ವಿ ಬಾಳಿಗಾ ಆಸ್ಪತ್ರೆಯ ಮನಃಶಾಸ್ತ್ರಜ್ಞ ಡಾ. ವಿರೂಪಾಕ್ಷ ದೇವರಮನೆ, ಜೀವನ ಶೈಲಿ ಮತ್ತು ಒತ್ತಡ ನಿರ್ವಹಣೆ” ಕುರಿತು ಮಾಹಿತಿ ನೀಡುತ್ತಾ, “ಒತ್ತಡಕ್ಕೆ ಮುಖ್ಯ ಕಾರಣ ಅತಿಯಾದ ನಿರೀಕ್ಷೆ ಮತ್ತು ಪರರೊಂದಿಗೆ ನಮ್ಮ ಹೋಲಿಕೆ. ಕುಟುಂಬದೊಳಗೆ ಸಂಬಂಧಗಳ ನಿರ್ವಹಣೆ ಮುಕ್ತ ಮಾತುಕತೆಯಿಂದಷ್ಟೇ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಜಗದೀಶ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಿತೇಶ್ ಕೋಟ್ಯಾನ್, ಮಹಿಳಾ ಸಂಚಾಲಕಿ ಕು. ನವಿಷಾ ಉಪಸ್ಥಿತರಿದ್ದರು. ಸಂವಾದ ಕಾರ್ಯಕ್ರಮದ ಸಂಯೋಜನೆಯನ್ನು ಅಮಿತಾಂಜಲಿ ನಡೆಸಿದರು. ಕಾರ್ಯಕ್ರಮದ ನಿರ್ದೇಶಕರು ಹಾಗೂ ವ್ಯಕ್ತಿತ್ವ ವಿಕಸನ ನಿರ್ದೇಶಕಿ ಶಕುಂತಲಾ ಸುಕೇಶ್ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ಮಾಲತಿ ಅಮೀನ್ ವಂದಿಸಿದರು. ವಿನೋದ್ ಮಂಚಿ ಹಾಗೂ ಕು. ಶ್ರೀಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!