Connect with us

Hi, what are you looking for?

Diksoochi News

ರಾಜ್ಯ

ಸಿಎಂ ಬೊಮ್ಮಾಯಿಗೆ ಕೋವಿಡ್ ದೃಢ

1

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸಿಎಂ ಅವರೇ ಟ್ವೀಟ್ ಮಾಡಿದ್ದು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸದ್ಯ ಆರ್.ಟಿ.ನಗರ ನಿವಾಸದಲ್ಲಿ ಐಸೋಲೇಷನಲ್ಲಿದ್ದು, ಅವರ ಸಿಎಂ ಬೊಮ್ಮಾಯಿ ತಮ್ಮ ದೆಹಲಿಯ ಪ್ರವಾಸ ರದ್ದುಗೊಳಿಸಿದ್ದಾರೆ.

ಸಿಎಂ ಇಂದು ಬೆಳಗ್ಗೆ 11.30ಕ್ಕೆ ದೆಹಲಿಗೆ ತೆರಳಬೇಕಿತ್ತು. ದೆಹಲಿಯಲ್ಲಿ ಸಂಜೆ ಪ್ರಧಾನಿ ನೇತೃತ್ವದಲ್ಲಿ ನಡೆಯಲಿರುವ ಆಜಾದಿ ಕಿ ಅಮೃತ ಮಹೋತ್ಸವದ ರಾಷ್ಟ್ರೀಯ ಸಮಿತಿ ಸಭೆ, ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಬೇಕಿತ್ತು. ಆದರೆ, ಅವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ದಿನಗಳ ದೆಹಲಿ ಪ್ರವಾಸ ರದ್ದುಗೊಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!