Connect with us

Hi, what are you looking for?

Diksoochi News

ರಾಜ್ಯ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

1

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ(84) ಅವರು, ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು.

1979ರಲ್ಲಿ ‘ಕಾಡು ಕುದುರೆ’ ಚಲನಚಿತ್ರಕ್ಕೆ  ಕಾಡು ಕುದುರೆ ಓಡಿ ಬಂದಿತ್ತಾ ಹಾಡನ್ನು ಸುಬ್ಬಣ್ಣ ಹಾಡಿದ್ದರು.  ಈ ಹಾಡು ಬಹಳಷ್ಟು ಜಯಪ್ರಿಯವಾಗಿತ್ತು.

Advertisement. Scroll to continue reading.

ಇದೇ ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ರಜತ ಕಮಲ ರಾಷ್ಟ್ರ ಪ್ರಶಸ್ತಿ ಅವರಿಗೆ ಒಲಿದಿತ್ತು.

ವಿಶೇಷವೆಂದರೆ ಈ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗ ಸುಬ್ಬಣ್ಣರಾಗಿದ್ದರು.

1985ರಲ್ಲಿ ರಾಜ್ಯೋತ್ಸವ ಪುರಸ್ಕಾರ, 1988ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪುರಸ್ಕಾರ, 1999ರಲ್ಲಿ ಸಂತ ಶಿಶುನಾಳ ಷರೀಫ ಪ್ರಶಸ್ತಿ ಲಭಿಸಿದ್ದು, 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಸುಬ್ಬಣ್ಣ ಪಡೆದಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!