ದಕ್ಷಿಣ ಕನ್ನಡ : ಇಂದು ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧ್ವಜಾರೋಹಣದ ವೇಳೆ ದುರಂತ ಸಂಭವಿಸಿದೆ. ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವನ್ನಪ್ಪಿದ್ದಾರೆ.
ನಿವೃತ್ತ ಸೈನಿಕ ಗಂಗಾಧರ್ ಮೃತ ಪಟ್ಟವರು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಧ್ವಜಾರೋಹಣ ನಡೆಯುತ್ತಿತ್ತು. ನಿವೃತ್ತ ಸೈನಿಕ ಗಂಗಾಧರ್ ಮಾಡುತ್ತಿದ್ದರು. ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ.
Advertisement. Scroll to continue reading.
ಈ ವೇಳೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆದರೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.