Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ನೀಲಾವರದಲ್ಲಿ ಗೌಜು – ಗಮ್ಜಲ್; ಶಾಸಕ ರಘುಪತಿ ಭಟ್ ಉದ್ಘಾಟನೆ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಹಡಿಲು ಭೂಮಿಯಲ್ಲಿ ಬೆಳೆ ತೆಗೆದರೆ ಹಳೆ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿದಷ್ಟು ಪುಣ್ಯ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು.


ಭಾನುವಾರ ನೀಲಾವರ ಸೇತುವೆ ಬಳಿಯಲ್ಲಿ ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಜರುಗಿದ ಹಡಿಲು ಭೂಮಿ ಕೃಷಿಯ ಕಡೆ ನಟ್ಟಿ “ಗೌಜು ಗಮ್ಜಲ್-೨೦೨೨” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭತ್ತದ ಕಳೆದ ವರ್ಷ ಬೆಳೆದ ಕೇದಾರ ಕಜೆ ಅಕ್ಕಿಯನ್ನು ಪರ ವೂರ ಜನರು ಊರ ದೇವರ ಪ್ರಸಾದದಂತೆ ಸ್ವೀಕಾರ ಮಾಡುತ್ತಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರ ಹಡಿಲು ಭೂಮಿ ಮುಕ್ತ ಮಾಡುವ ಕೇದಾರೋತ್ಥಾನ ಟ್ರಸ್ಟ್ ಕಾರ್ಯ ಕ್ಕೆ ಈ ವರ್ಷ ಯುವ ಜನರೆ ಮನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂದರು.

Advertisement. Scroll to continue reading.

ಬಳಿಕ ಕೆಸರು ಗದ್ದೆಯಲ್ಲಿ ಆಯೋಜಿಸಲಾದ ವಿವಿಧ ಕ್ರೀಡೆಗಳಿಗೆ ಗದ್ದೆಗೆ ಪಂಚಾಮೃತವನ್ನು ಅರ್ಪಿಸಿ ಕ್ರೀಡೆಗಳಿಗೆ ಚಾಲನೆ ನೀಡಿ ಶಾಸಕರು ಸ್ಪರ್ಧೆಯಲ್ಲಿ ಭಾಗವಹಿಸಿದರು.

ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಂದ್ರ ಕುಮಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.


ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನ ಆಡಳಿತ ಮೊಕ್ತೇಸರ ರಘುರಾಮ್ ಮಧ್ಯಸ್ಥ, ರಾಜೀವ ಕುಲಾಲ್, ಗ್ರಾಮಾಂತರ ಬಿಜೆಪಿ ಅಧ್ಯಕ್ಕೆ ವೀಣಾ ನಾಯ್ಕ್, ಕೇದಾರೋತ್ಥಾನ ಟ್ರಸ್ಟ್ ನ ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ, ಕನ್ನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಧನಂಜಯ್ ಅಮೀನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿ ಉಮೇಶ್ ನಾಯ್ಕ್, ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷ ರಘುಪತಿ ಬ್ರಹ್ಮಾವರ, ಗ್ರಾಮಾಂತರ ಬಿಜೆಪಿ ಸಹ ವಕ್ತಾರ ವಸಂತ್ ಸೇರ್ವೆಗಾರ್, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಕೆ ಮಮತಾ ಶೆಟ್ಟಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ದೇವಾಡಿಗ, ಆಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ರಾಜು ಪೂಜಾರಿ ಉಪ್ಪೂರು , ಪಕ್ಷದ ಪ್ರಮುಖರಾದ ಪಂಚಮಿ ಮೋಹನ್ ಶೆಟ್ಟಿ ,ವಿಶ್ವ ಹಿಂದೂ ಪರಿಷತ್ ಬ್ರಹ್ಮಾವರದ ರಾಘವೇಂದ್ರ ಕುಂದರ್ ಜೆಬಿ, ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧೀರ್ ಶೆಟ್ಟಿ, ಗ್ರಾಮಾಂತರ ಬಿಜೆಪಿ ಮಾಜಿ ಅಧ್ಯಕ್ಷ ಜ್ಞಾನ ವಸಂತ್ ಶೆಟ್ಟಿ, ಚೇರ್ಕಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ, ಕರ್ಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತಡಾಲ್ ಸುರೇಶ್ ಶೆಟ್ಟಿ, ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ನಾರಾಯಣ್, ನಿವೃತ್ತ ಮುಖ್ಯೋಪಾಧ್ಯಾಯ ಆರೂರು ತಿಮ್ಮಪ್ಪ ಶೆಟ್ಟಿ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ವಿಜ್ಞಾನಿಗಳಾದ ಡಾ. ಶಂಕರ್ ಉಪಸ್ಥಿತರಿದ್ದರು.

ಕೆಸರು ಗದ್ದೆಯಲ್ಲಿ ನಾನಾ ಆಟೋಟ ಸ್ಪರ್ಧೆಗಳು ಜರುಗಿತು.

ಗೌಜು ಗಮ್ಜಲ್ ಸಂಘಟಕ ಪ್ರತಾಪ್ ಹೆಗ್ಡೆ ಮಾರಾಳಿ ಸ್ವಾಗತಿಸಿ, ಕಮಲಾಕ್ಷ್ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿ, ಮನೋಹರ್ ಶೆಟ್ಟಿ ವಂದಿಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!