Connect with us

Hi, what are you looking for?

Diksoochi News

ರಾಜ್ಯ

ಶಿರಾಳಕೊಪ್ಪದಲ್ಲಿ ಎರಡು ಕೋಮಿನ ಯುವಕರ ನಡುವೆ ಗಲಾಟೆ; ಅಂಗಡಿ ಮುಂಗಟ್ಟುಗಳು ಬಂದ್

1

ಶಿವಮೊಗ್ಗ: ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯಮಟ್ಟದ ಶಾಲಾ ಕ್ರೀಡಾಕೂಟ ನಡೆಯುತ್ತಿತ್ತು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ಉಂಟಾಗಿದೆ. ಪರಿಣಾಮ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಏಕಾಏಕಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್‌ ಮಾಡಿಸಿದ್ದಾರೆ.

ಗಲಾಟೆ ಅಂತ್ಯಗೊಂಡು ಎಲ್ಲರೂ ಹೋಗುವ ವೇಳೆ ಮತ್ತೆ ಎರಡು ಕೋಮಿನ ಗುಂಪುಗಳ ನಡುವೆ ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿ ಮಾರಾಮಾರಿಯಾಗಿದೆ ಎನ್ನಲಾಗಿದೆ.

Advertisement. Scroll to continue reading.

ಈ ವೇಳೆ ಗಾಯಗೊಂಡ ಗಾಯಾಳುಗಳನ್ನು ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿರಾಳಕೊಪ್ಪ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!