ಬೈಂದೂರು: ಬೋಳಂಬಳ್ಳಿ ಗ್ರಾಮದ ಮಕ್ಕಿಮನೆ ಮನೆ ನಿವಾಸಿ ಪ್ರದಿಪ್ ಪೂಜಾರಿ ಮತ್ತು ಸುಮಿತ್ರಾ ದಂಪತಿಯ ಪುತ್ರಿ ಸನ್ನಿಧಿ(8) ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವೇಳೆ ಕಿರಿದಾದ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಇಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ಮೃತರ ತಂದೆ ತಾಯಿಯನ್ನು ಭೇಟಿಮಾಡಿ, ಪೋಷಕರಿಗೆ ಧೈರ್ಯ ತುಂಬಿ, ವೈಯುಕ್ತಿಕವಾಗಿ ಧನ ಸಹಾಯವನ್ನು ಮಾಡಿದರು.
ಈ ಸಂದರ್ಭದಲ್ಲಿ ಮಾನ್ಯ ಶಾಸಕ ಸುಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಬಾಬು ಹೆಗ್ಡೆ, ಶಂಕರ್ ಪೂಜಾರಿ ಗಣ್ಯರು ಉಪಸ್ಥಿತರಿದ್ದರು.