Connect with us

Hi, what are you looking for?

Diksoochi News

ರಾಜ್ಯ

ಅನಾರೋಗ್ಯದಿಂದ ಪತ್ನಿ ಸಾವು; ಮನನೊಂದು ಪತಿ ಆತ್ಮಹತ್ಯೆ!

2

ಅಥಣಿ : ಅನಾರೋಗ್ಯದಿಂದ ಪತ್ನಿ ಸಾವನ್ನಪ್ಪಿದ ಎರಡೇ ದಿನದಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ.

ಝುಂಜರವಾಡ ಗ್ರಾಮದ ಸದಾಶಿವ ರಾಮಪ್ಪ ಕಾಂಬಳೆ (26) ಆತ್ಮಹತ್ಯೆ ಮಾಡಿಕೊಂಡವರು.

ಕೇವಲ‌ ಎರಡು ದಿನಗಳ ಹಿಂದಷ್ಟೇ ಸದಾಶಿವ ಪತ್ನಿ ರೂಪಾ ಕಾಂಬಳೆ ಅನಾರೋಗ್ಯದಿಂದ ನಿಧನರಾಗಿದ್ದರು. ಇದರಿಂದ ಸದಾಶಿವ ನೊಂದಿದ್ದರು ಎನ್ನಲಾಗಿದೆ.

Advertisement. Scroll to continue reading.

ಹೀಗಾಗಿ ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಅವರು ತಡರಾತ್ರಿ ಸಾವನ್ನಪ್ಪಿದ್ದಾರೆ.

ಎರಡು ವರ್ಷದ ಹಿಂದೆಯಷ್ಟೇ ಸದಾಶಿವ ರಾಮಪ್ಪ ಕಾಂಬಳೆ, ರೂಪಾ(21) ಅವರನ್ನು ವಿವಾಹವಾಗಿದ್ದರು. ಆದರೆ ಅನಾರೋಗ್ಯ ಕಾರಣ ರೂಪಾ ಅವರು ಕಳೆದ ಎರಡು ದಿನದ ಹಿಂದೆಯಷ್ಟೇ ನಿಧನರಾಗಿದ್ದರು. 

ಐಗಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!