ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಶನಿವಾರ ರಸ್ತೆಗೆ ಬೃಹತ್ ಮರ ಬಿದ್ದಿದೆ. ಪರಿಣಾಮ ಮೂರು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.
ಚಾರ್ಮಾಡಿ ಘಾಟ್ನ 8ನೇ ತಿರುವಿನಲ್ಲಿ ಹೆದ್ದಾರಿಗೆ 3 ಮರಗಳು ಬಿದ್ದು ಮೂರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. 2 ಕಿಮೀ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸಮಾಜ ಸೇವಕ ಹಸನಬ್ಬ ಚಾರ್ಮಾಡಿ ಹಾಗೂ ಮೊಹಮ್ಮದ್ ಆರೀಫ್ ತಂಡ ಹಾಗೂ ಅಲ್ಲಿಯ ಸ್ಥಳೀಯರು ಸೇರಿ ಯಂತ್ರದಿಂದ ಮರವನ್ನು ತೆರವುಗೊಳಿಸಿದರು.
Advertisement. Scroll to continue reading.

ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ,ಬಣಕಲ್, ಬಾಳೂರು ಸುತ್ತಮುತ್ತ ಮಳೆಯ ಅರ್ಭಟ ಹೆಚ್ಚಾಗಿದೆ.
ಗುರುವಾರದಿಂದ ಶನಿವಾರದ ವರೆಗೆ 164.2 ಮಿ.ಮೀ(16.4ಸೆ.ಮೀ) ಮಳೆ ದಾಖಲಾಗಿದ್ದು ಶನಿವಾರವೂ ಧಾರಾಕಾರ ಮಳೆ ಮುಂದುವರೆದಿದೆ.
Advertisement. Scroll to continue reading.

In this article:charmadi ghat, Chikkamagaluru, Diksoochi news, heavy rain, kottigehara, rain, tree fell down

Click to comment