ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ನೇಶನಲ್ ಪದವಿ ಪೂರ್ವ ಕಾಲೇಜು, ಬಾರ್ಕೂರು ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಟೆನಿಸ್ ವಾಲಿಬಾಲ್, ಟೆನಿಕ್ವಾಯಿಟ್, ಜಂಪ್ ರೋಪ್ ಪಂದ್ಯಾಟ ಬಾರ್ಕೂರು ಕ್ರೀಡಾಂಗಣದಲ್ಲಿ ನಡೆಯಿತು.
ಬಾರ್ಕೂರು ವಿದ್ಯಾಭಿವರ್ದಿನಿ ಸಂಘದ ಬಿ.ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಪಂದ್ಯಾಟವನ್ನು ಸಂಸ್ಥೆಯ ಕಾರ್ಯದರ್ಶಿ, ಬಿ.ಸೀತಾರಾಮ ಶೆಟ್ಟಿ ಉದ್ಘಾಟಿಸಿದರು. ಸಂಸ್ಥೆಯ ಸಂಚಾಲಕ ಬಿ.ಗೋಪಾಲ್ ನಾಯ್ಕ್ ,ಅಮೃತ ಮಹೋತ್ಸವದ ಸಮಿತಿಯ ಅಧ್ಯಕ್ಷ ರಾಜರಾಮ್ ಶೆಟ್ಟಿ, ಆಡಳಿತ ಮಂಡಳಿಯ ಕೋಶಾಧಿಕಾರಿ ಕೃಷ್ಣ ಹೆಬ್ಬಾರ್ ಮತ್ತು ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಜ್ಯೋತಿ ಶೆಟ್ಟಿ ಉಪಸ್ಥಿತರಿದ್ದರು.


ಪ್ರಾಂಶುಪಾಲ ಯು. ಕೊಟ್ರಸ್ವಾಮಿ ಸ್ವಾಗತಿಸಿ, ಗಣಿತಶಾಸ್ತ್ರ ಉಪನ್ಯಾಸಕಿ ಉಷಾ ಕಿರಣ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಸಂಸ್ಥೆಯ ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ಶೆಟ್ಟಿ ವಂದಿಸಿದರು.
ಸಮಾರೋಪದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಶೇಡಿಕೋಡ್ಲು ವಿಠ್ಠಲಶೆಟ್ಟಿ ,ಶ್ರೀನಿಕೇತನ ಪ್ರೌಢಶಾಲೆ ಮಟಪಾಡಿಯ ಮುಖ್ಯೋಪಾಧ್ಯಾಯ ಅಶೋಕ ಕುಮಾರ್ ಶೆಟ್ಟಿ , ಅಮೃತ ಮಹೋತ್ಸವದ ಕೋಶಾಧಿಕಾರಿ ಶ್ರೀರಾಮಚಂದ್ರ ಕಾಮತ್ ಮತ್ತು ಆಡಳಿತ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಟೆನಿಕ್ವಾಯಿಟ್ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಎಸ್ ವಿ ಪಿ ಯು ಕಾಲೇಜು ಗಂಗೊಳ್ಳಿ ಪ್ರಥಮ ಸ್ಥಾನ, ವೆಂಕಟರಮಣ ಪಿಯು ಕಾಲೇಜ್ ಕುಂದಾಪುರ ದ್ವಿತೀಯ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ವೆಂಕಟರಮಣ ಪಿಯು ಕಾಲೇಜ್ ಕುಂದಾಪುರ ಪ್ರಥಮ ಸ್ಥಾನ, ಎನ್ ಜೆ ಸಿ ಬಾರ್ಕೂರು ದ್ವಿತೀಯ ಸ್ಥಾನವನ್ನು ಪಡೆದರು.
ವೆಂಕಟರಮಣ ಪಿಯು ಕಾಲೇಜ್ ಕುಂದಾಪುರ ಟೆನಿಸ್ ವಾಲಿಬಾಲಿನಲ್ಲಿ ದ್ವಿತೀಯ ಸ್ಥಾನ ಹಾಗೂ ಜ್ಞಾನ ಸುಧಾ ಪದವಿಪೂರ್ವ ಕಾಲೇಜು ಕಾರ್ಕಳ ತಂಡದ ಐದು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಬಾಲಕ ಮತ್ತು ಬಾಲಕಿಯರ ಜಂಪ್ ರೋಪ್ ಸ್ಪರ್ಧೆಯಲ್ಲಿ ಎನ್ಜೆಸಿ ಬಾರ್ಕೂರು ಪ್ರಥಮ ಸ್ಥಾನ ಹಾಗೂ ಬಾಲಕರ ಟೆನಿಸ್ ವಾಲಿಬಾಲ್ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನವನ್ನು ಪಡೆದು ಎರಡು ಸ್ಪರ್ಧೆಗಳಲ್ಲೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಿತ್ರ: ೩ ಬಿಎಂ ಆರ್ ಬಾರಕೂರು ೧-೨ -೩

