ಬ್ರಹ್ಮಾವರ : ಮನೆಯ ಬೀಗ ಮುರಿದು ಬೆಲೆ ಬಾಳುವ ವಸ್ತುಗಳನ್ನು ಕದ್ದಿರುವ ಘಟನೆ ಯಡ್ತಾಡಿ ನಡೆದಿದೆ
ಎಚ್. ಕುಶಾಲ ಶೆಟ್ಟಿ ಇವರು ಒಂದು ತಿಂಗಳ ಹಿಂದೆ ಬೆಂಗಳೂರಿನಲ್ಲಿರುವ ಮಗಳ ಮನೆಗೆ ಹೋಗಿದ್ದರು. ಮನೆಯನ್ನು ನೋಡಿಕೊಳ್ಳಲು ಕೆಲಸದವಳು ಇದ್ದು ಅವರು ದಿನಾಲೂ ಬೆಳಿಗ್ಗೆ 8:30 ಗಂಟೆಗೆ ಮನೆಗೆ ಬಂದು ಸಂಜೆ 4:30 ಗಂಟೆಗೆ ಮನೆಗೆ ಬೀಗ ಹಾಕಿ ಅವರ ಮನೆಗೆ ಹೋಗುತ್ತಿದ್ದರು.
ಮಂಗಳವಾರ ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಮನೆಗೆ ಬಂದು ನೋಡಿದಾಗ ಮನೆಯ ಎದುರಿನ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಮನೆಯಲ್ಲಿನ ಕಪಾಟಿನಲ್ಲಿದ್ದ ಸುಮಾರು 50 ಸಾವಿರ ಮೌಲ್ಯದ 6 ರೇಷ್ಮೆ ಸೀರೆಗಳು, ಸುಮಾರು 25 ಸಾವಿರ ಬೆಲೆ ಬಾಳುವ 2 ವಾಚುಗಳು ಮತ್ತು ಸುಮಾರು 15 ಸಾವಿರ ಮೌಲ್ಯದ ಕ್ಯಾಮಾರವನ್ನು ಕಳವು ಮಾಡಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.
Advertisement. Scroll to continue reading.

ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.