ಬೆಂಗಳೂರು: ಬ್ರೇಕ್ ಫೇಲ್ಯೂರ್ ನಿಂದ ಬಿಎಂಟಿಸಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನ ಮೈಸೂರು ರಸ್ತೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ ಮೇಲೆ ಬುಧವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಮೇಲ್ಸೇತುವೆಯ ಚರ್ಚ್ ಸರ್ಕಲ್ ತಿರುವಿನಲ್ಲಿ ಬಸ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಹೀಗಾಗಿ ಮೈಸೂರು ರಸ್ತೆ ಮೇಲ್ಸೇತುವೆ ಮೇಲೆ ಕೆಲಕಾಲ ಸಂಚಾರ ಅಸ್ಥವ್ಯಸ್ಥವಾಗಿತ್ತು.
ಕೆ.ಆರ್.ಮಾರ್ಕೆಟ್ ನಿಂದ ಚಾಮರಾಜಪೇಟೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನ ಬ್ರೇಕ್ ಫೇಲ್ಯೂರ್ ಆಗಿ ರೋಡ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಾರ್ಕೆಟ್ ಫ್ಲೈ ಓವರ್ ಮೇಲೆ ಬೆಳಗ್ಗೆ 7:10 ರ ಸುಮಾರಿಗೆ ಘಟನೆ ನಡೆದಿದೆ. ಬಸ್ನಲ್ಲಿ ಯಾವೊಬ್ಬ ಪ್ರಯಾಣಿಕರು ಸಹ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅದೃಷ್ಟವಶಾತ್ ಬಚಾವ್ ಆಗಿದ್ದಾರೆ. ಚಿಕ್ಕಪೇಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.