Connect with us

Hi, what are you looking for?

Diksoochi News

ರಾಷ್ಟ್ರೀಯ

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ಪತ್ನಿಯ ಸಂತೈಸಲು ಹೋದ ಪತಿ; ಆಗಿದ್ದೇ ಬೇರೆ…

0

ವಾರಾಣಸಿ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ಪತ್ನಿಯನ್ನು ಸಂತೈಸಲು ಹೋದ ಗಂಡನೂ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ.

ಖುಷ್ಟೂ ಸೋನಕ‌ ( 28) ಹಾಗೂ ಗೋವಿಂದ್ ಸೋನಕ‌ (30) ಮೃತ ದಂಪತಿ.

ಖುಷ್ಬೂ ಸೋನಕ ಪತಿ ತುಂಬಾ ಕುಡಿಯುತ್ತಾನೆ ಎಂದು ಮನನೊಂದು ಸಾರಾನಾಥ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಕೋಶಿ ರೈಲ್ವೆ ಕ್ರಾಸಿಂಗ್ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದರು.

Advertisement. Scroll to continue reading.

ವಿಷಯ ತಿಳಿದು ಹೆಂಡತಿಯನ್ನು ಸಮಾಧಾನಪಡಿಸಿ ಕರೆದುಕೊಂಡು ಬರಲು ಗೋವಿಂದ್ ರೈಲು ಹಳಿ ಬಳಿ ಹೋಗಿದ್ದರು.

ಈ ವೇಳೆ ಹೆಂಡತಿಯನ್ನು ತಬ್ಬಿಕೊಂಡು ಸಂತೈಸಲು ಮುಂದಾಗಿದ್ದರು. ಆದರೆ, ಇದೇ ವೇಳೆ ರೈಲೊಂದು ಅವರ ಮೇಲೆ ಹಾಯ್ದು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಮೃತ ದಂಪತಿಗೆ ಒಬ್ಬ ಗಂಡು ಹಾಗೂ ಇಬ್ಬರು ಹೆಣ್ಣುಮಕ್ಕಳಿದ್ದರು. ಗೋವಿಂದ್ ಸೋನಕ‌ ಹಣ್ಣಿನ ವ್ಯಾಪಾರಿಯಾಗಿದ್ದರು ಎಂದು ಸಾರಾನಾಥ ಪೊಲೀಸ್ ಠಾಣೆ ಅಧಿಕಾರಿ ಬ್ರಿಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!