ಉಡುಪಿ: ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಅಂಬಾಗಿಲು ಜಂಕ್ಷನ್ ಬಳಿ ನಡೆದಿದೆ.
ಶ್ರೀನಿವಾಸ(83) ಮೃತ ವ್ಯಕ್ತಿ.
ನವೆಂಬರ್ 2 ರಂದು ಮಧ್ಯಾಹ್ನ ಶ್ರೀನಿವಾಸ ಅವರು ಪುತ್ತೂರು ದೇವಸ್ಥಾನಕ್ಕೆ ಹೋಗಿ ವಾಪಾಸು ಮನೆಗೆ ಬರುತ್ತಿದ್ದ ವೇಳೆ ರಾ ಹೆ-66ರಲ್ಲಿ ಅಂಬಾಗಿಲು ಜಂಕ್ಷನ್ ಬಳಿ ಕಾರು ಡಿಕ್ಕಿ ಹೊಡೆದಿದೆ.
Advertisement. Scroll to continue reading.

ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು, ತಲೆಗೆ ಗಂಬೀರ ಸ್ವರೂಪದ ಗಾಯವಾಗಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಶುಕ್ರವಾರ ಮೃತಪಟ್ಟಿದ್ದಾರೆ.
ಕಾರಿನ ಚಾಲಕ ಮನೀಶ್ ಎಂಬಾತ ಕಾರನ್ನು ದುಡುಕು ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಮೃತರ ಮಗ ನೀಡಿದ ದೂರಿನ ಅನ್ವಯ ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.

In this article:accident, ambagilu junction, death, Diksoochi news, putturu temple, Udupi
Click to comment

































