Connect with us

Hi, what are you looking for?

Diksoochi News

ರಾಜ್ಯ

ಪಾಂಡವಪುರ : ವಿಸಿ ನಾಲೆಗೆ ಬಿದ್ದ ಕಾರು; ಐವರ ದುರ್ಮರಣ

0

ಮಂಡ್ಯ: ವಿ.ಸಿ.ನಾಲೆಗೆ ಕಾರೊಂದು ಉರುಳಿ ಬಿದ್ದು, ಐವರು ಸಾವನ್ನಪ್ಪಿರುವ ದುರಂತ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ಮಂಗಳವಾರ ಸಂಜೆ ನಡೆದಿದೆ.

ಮೃತರನ್ನು ಚಂದ್ರಪ್ಪ(61), ಕೃಷ್ಣಪ್ಪ (60) ಧನಂಜಯ (55), ಬಾಬು ಹಾಗೂ ಜಯಣ್ಣ ಎಂದು ಗುರುತಿಸಲಾಗಿದೆ. ಮೃತರು ಗುಂಗರಹಳ್ಳಿ, ನೊಣವಿನಕೆರೆ ಹಾಗೂ ತಿಪಟೂರು ಮೂಲದವರಾಗಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ವಾಸವಿದ್ದರು ಎನ್ನಲಾಗಿದೆ. ಮೈಸೂರಿನಿಂದ ಭದ್ರಾವತಿಗೆ ವಾಪಾಸ್ ಹೋಗುವಾಗ ಘಟನೆ ನಡೆದಿದೆ.

ಕಾರು ಮೈಸೂರು ಕಡೆಯಿಂದ ಬರುತ್ತಿತ್ತು ಎನ್ನಲಾಗಿದೆ. ಪಾಂಡವಪುರದ ಬನಘಟ್ಟ ಬಳಿ ಬರುತ್ತಿರುವ ವೇಳೆ ಕಾರು ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ಅಲ್ಲೇ ಇದ್ದ ವಿಸಿ ನಾಲೆಗೆ ಕಾರು ಬಿದ್ದಿದೆ ಎನ್ನಲಾಗಿದೆ.

Advertisement. Scroll to continue reading.

ಸ್ಥಳೀಯರು ಕಾರನ್ನು ಮೇಲಕ್ಕೆತ್ತೋ ಪ್ರಯತ್ನ ಮಾಡಿದ್ದಾರೆ. ಕೊನೆಗೆ ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಪಾಂಡವಪುರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಮೃತದೇಹಗಳನ್ನು ಮೇಲಕ್ಕೆ ಎತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!