Connect with us

Hi, what are you looking for?

Diksoochi News

ಕರಾವಳಿ

ಉಡುಪಿ: ಹೃದಯಾಘಾತದಿಂದ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ನಿಧನ

1

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.

ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಸಂಭವಿಸಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಮಣಿಪಾಲ ಅಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಮ್ಮಣ್ಣರವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ

1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಹೆಮಣ್ಣ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು ಸರಕಾರದ ಗಮನ ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು‌.

Advertisement. Scroll to continue reading.

ಇತ್ತೀಚೆಗಷ್ಟೇ ಕನೆಕ್ಟ್ ಮಿಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ, ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯ ದಲ್ಲಿ ತೊಡಗಿಸಿಕೊಂಡಿದ್ದರು.

ಪರಿಸರ ಪ್ರೇಮಿಯೂ, ಕೃಷಿ ಪ್ರೇಮಿಯೂ ಅಗಿದ್ದ ಇವರು, ಕರಾವಳಿಯಲ್ಲಿ ಕಾಂಡ್ಲವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮೃತರು ತಂದೆ ತಾಯಿ,ಪತ್ನಿ , ಪುತ್ರ , ನಾಲ್ಕು ಜನ ಸಹೋದರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!