Connect with us

Hi, what are you looking for?

Diksoochi News

ರಾಜ್ಯ

ಮುಸ್ಲಿಂರಿಗೆ ಅನ್ಯಾಯವಾಗಲು ಬಿಡೊಲ್ಲ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

2

ಬೆಳಗಾವಿ: ಈ ದೇಶದಲ್ಲಿ ಮುಸ್ಲಿಮರಿಗೆ ಅನ್ಯಾಯವಾಗಲು ಬಿಡೊಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ದಕ್ಷಿಣ ಭಾರತದ ಮೌಲ್ವಿಗಳ ಸಮಾವೇಶದಲ್ಲಿ ಮಾತನಾಡಿದ್ದ ಸಿಎಂ ಸಿದ್ಧರಾಮಯ್ಯ, ಮುಸ್ಲಿಮರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಬದ್ಧ. ದೇಶದ ಸಂಪತ್ತಿನಲ್ಲಿ ನಿಮಗೂ ಹಂಚುತ್ತೇವೆ. ಅಲ್ಪಸಂಖ್ಯಾತ ಇಲಾಖೆಗೆ ೧೦ ಸಾವಿರ ಕೋಟಿ ಅನುದಾನ ನೀಡುತ್ತೇವೆ ಎಂದು ಹೇಳಿದ್ದರು.

ಇದಕ್ಕೆ ಪ್ರತಿಪಕ್ಷದ ನಾಯಕ ಆರ್ ಅಶೋಕ, ಮಾಜಿ ಉಪಮುಖ್ಯಮಂತ್ರಿ ಡಾ ಅಶ್ವತ್ಥನಾರಾಯಣ್, ಶಾಸಕ ಮಹೇಶ್ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಮುಖಂಡರು ಕಿಡಿಕಾರಿದ್ದಾರೆ.

Advertisement. Scroll to continue reading.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರ್ ಅಶೋಕ, ಸಿದ್ದರಾಮಯ್ಯ ಅವರು ದೇಶದ್ದೇನು, ಬಿಟ್ರೆ ಪ್ರಪಂಚದ ಆಸ್ತಿಯನ್ನೇ ಕೊಟ್ಟುಬಿಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕಾAಗ್ರೆಸ್ ಸರ್ಕಾರ ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳ ಹಾಗೆ ನೋಡುತ್ತದೆ. ಸಿದ್ದರಾಮಯ್ಯ ಟಿಪ್ಪು ಪ್ರೇಮಿ. ಈ ಹಿಂದೆ ಟಿಪ್ಪು ಜಯಂತಿ, ಶಾದಿ ಭಾಗ್ಯಗಳನ್ನೆಲ್ಲಾ ಮಾಡಿದರು. ರಾಜ್ಯದ ಜನ ಅವರಿಗೆ ಚುನಾವಣೆಯಲ್ಲಿ ತಿರಸ್ಕಾರ ಮಾಡಿದರು. ಈಗ ಮತ್ತೆ ಅಧಿಕಾರಕ್ಕೆ ಬಂದಿದ್ದು ಮತ್ತೆ ಮುಸ್ಲಿಂ ಓಲೈಕೆ ಶುರು ಹಚ್ಚಿಕೊಂಡು ಬಿಟ್ಟಿದ್ದಾರೆ ಎಂದು ಕಿಡಿಕಾರಿದರು.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ ಅಶ್ವತ್ಥನಾರಾಯಣ್, ಎಲ್ಲಾ ಸಮುದಾಯವನ್ನೂ ಸಮನಾಗಿ ನೋಡಿಕೊಳ್ಳಬೇಕು. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನವರು ಮುಸ್ಲಿಮರ ತುಷ್ಟೀಕರಣ ಮಾಡುತ್ತಿದ್ದಾರೆ. ಕಾಂಗ್ರೆಸಿಗರ ಕೋಮುವಾದದಿಂದಾಗಿ ರಾಜ್ಯದಲ್ಲಿ ಸ್ವಾಸ್ತ್ಯ ಕದಡುತ್ತಿದ್ದಾರೆ ಎಂದು ದೂರಿದ್ದಾರೆ

ಇನ್ನು ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಮಾತನಾಡಿ, ಮುಸ್ಲಿಮರು ಈಗ ಹುಟ್ಟಿದ್ದಾರೆ ಅಂದ್ಕೊAಡಿದ್ದಾರೆ ಸಿದ್ದರಾಮಯ್ಯ. ದೇಶ ಹುಟ್ಟಿದಾಗಲೇ ಮುಸ್ಲಿಮರು ಸಹ ಇಲ್ಲಿ ಇದ್ದಾರೆ. ಮುಸ್ಲಿಮರಿಗೆ ಈ ದೇಶ ಯಾವುದೇ ಅನ್ಯಾಯ ಮಾಡಿಲ್ಲ. ನ್ಯಾಯ ಕೊಡಿಸುತ್ತೇನೆ ಅಂದ್ರೆ ಏನು ಅನ್ಯಾಯ ಆಗಿದೆ? ಯಾವ ಸರ್ಕಾರವೂ ಅವರನ್ನು ಬೀದಿಗೆ ಬಿಟ್ಟಿಲ್ಲ. ಬಿಜೆಪಿ ಸರ್ಕಾರವೂ ಮುಸ್ಲಿಮರಿಗೆ ಸಹಾಯ ಮಾಡಿದೆ. ಸಿದ್ದರಾಮಯ್ಯನವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement. Scroll to continue reading.

ಕಾಂಗ್ರೆಸ್ ನಿಂದ ಧರ್ಮರಾಜಕಾರಣ ಜೊತೆಗೆ ಹಿಂದೆ ನಾವು ಧರ್ಮ ರಾಜಕಾರಣ ಮಾಡುತ್ತೇವೆ ಎಂದು ಕಾಂಗ್ರೆಸ್ ನವರು ಆರೋಪಿಸಿದ್ದರು. ಆದರೆ ಈಗ ಅವರೇ ಧರ್ಮ ರಾಜಕಾರಣ ಮಾಡುತ್ತಿದ್ದಾರೆ. ಇಷ್ಟೇಲ್ಲಾ ಹೇಳುವ ಕಾಂಗ್ರೆಸ್ನವರು ಮುಸ್ಲಿಮರನ್ನು ಸಿಎಂ ಮಾಡಿದ್ದಾರಾ? ಅಧ್ಯಕ್ಷರನ್ನಾಗಿ ಮಾಡಿದ್ದಾರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಈ ರೀತಿ ಓಲೈಸಿ ಮುಸ್ಲಿಮರನ್ನು ಮೂಲೆ ಗುಂಪು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಮಹೇಶ್ ಟೆಂಗಿನಕಾಯಿ ಮಾತನಾಡಿ, ಹುಬ್ಬಳ್ಳಿ ಮುಸ್ಲಿಂ ಮೌಲ್ವಿಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಮುಸ್ಲಿಮರಿಗೆ ಹೆಚ್ಚು ಅನುದಾನ ಕೊಡುವುದಾಗಿ ಹೇಳ್ತಾರೆ. ಪಂಚ ರಾಜ್ಯ ಚುನಾವಣೆಯಲ್ಲೂ ಮುಸ್ಲಿಂ ತುಷ್ಟೀಕರಣ ಮಾಡಲಾಗಿದೆ. ಇದರಿಂದಾಗಿಯೇ ಕಾಂಗ್ರೆಸ್ ಗೆ ಸೋಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!